ಹರ ಜಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ರಾಜ್ಯ ಹಾಗೂ ದೇಶದಲ್ಲಿ ಓಮ್ರಿಕಾನ್ ಭೀತಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಮತ್ತು ಈ ನಿಟ್ಟಿನಲ್ಲಿ ರಾಜ್ಯ ಸರಕಾರ ನೀಡಿರುವ ನಿಯಮಾವಳಿಗಳನ್ನು ಪಾಲಿಸುವ ಉದ್ದೇಶದಿಂದ ಹರಕ್ಷೇತ್ರ ಹರಿಹರದಲ್ಲಿ ಆಯೋಜಿಸಲಾಗಿದ್ದ ಹರ ಜಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ದಿನಾಂಕ 10-01-2022ರಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ನಡೆದಂತಹ ಸಮುದಾಯದ ಮುಖಂಡರುಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.